ಪಡುಬಿದ್ರಿ: ಅದಾನಿ ಫೌಂಡೇಶನ್ ಹಾಗೂ ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ ಇವರ ವತಿಯಿಂದ ವಿವಿಧ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸ್ಥಾವರದ ಸುತ್ತಮುತ್ತಲಿನ 12 ಗ್ರಾ.ಪಂ.ಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಪಡುಬಿದ್ರಿ ಬಂಟರ ಭವನದಲ್ಲಿ ಭಾನುವಾರ ನಡೆಯಿತು.
ಅದಾನಿ ಫೌಂಡೇಶನ್ ಜಂಟಿ ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಸ್ಥಾವರದ ಸುತ್ತಮುತ್ತಲಿನ 12 ಗ್ರಾ.ಪಂ.ಗಳಲ್ಲಿ ವಾಸಿಸುತ್ತಿರುವ 905 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಒಟ್ಟು ರೂ.20 ಲಕ್ಷ ಮೌಲ್ಯದ ವಿದ್ಯಾರ್ಥಿವೇತನವನ್ನು ನೀಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್, ಪಡುಬಿದ್ರೆ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ, ಕುತ್ಯಾರು ಗ್ರಾ.ಪಂ. ಅಧ್ಯಕ್ಷೆ ಲತಾ ಆಚಾರ್ಯ, ಮಜೂರು ಗ್ರಾ.ಪಂ. ಅಧ್ಯಕ್ಷೆ ಶರ್ಮಿಳಾ ಆಚಾರ್ಯ, ಬಡಾ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಗಣೇಶ್, ಎಲ್ಲೂರು ಗ್ರಾ.ಪಂ. ಅಧ್ಯಕ್ಷ ಜಯಂತ್ ಭಟ್, ಇನ್ನಾ ಗ್ರಾ.ಪಂ. ಅಧ್ಯಕ್ಷ ಕುಶಾ ಮೂಲ್ಯ, ಅದಾನಿ ಫೌಂಡೇಶನ್ ಸಿಬ್ಬಂಧಿ ವರ್ಗದವರಾದ ಅನುದೀಪ್ ಪೂಜಾರಿ, ಶುಭಮಂಗಳ ಎರ್ಮಾಳ್, ರಿತೇಶ್ ಮೂಲ್ಯ, ಧನರಾಜ್, ಯಶವಂತ್ ಆಂಚನ್ ಮತ್ತೀತರರು ಉಪಸ್ಥಿತರಿದ್ದರು.
ಯುಪಿಸಿಎಲ್ ಕಂಪನಿಯ ಡಿಜಿಎಂ ರವಿ ಆರ್. ಜೇರೆ ಸ್ವಾಗತಿಸಿ, ದೇವಿಪ್ರಸಾದ್ ಬೆಳ್ಳಿಬೆಟ್ಟು ನಿರೂಪಿಸಿ ವಂದಿಸಿದರು.
ಅದಾನಿ ಯುಪಿಸಿಎಲ್ ವತಿಯಿಂದ 20 ಲಕ್ಷ ಮೌಲ್ಯದ ವಿದ್ಯಾರ್ಥಿ ವೇತನ ವಿತರಣೆ
Subscribe
Login
0 Comments