ನವದೆಹಲಿ: ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಕೇಂದ್ರಸರ್ಕಾರ ಪದ್ಮ ಪ್ರಶಸ್ತಿ ಪಟ್ಟಿಯನ್ನು ಪ್ರಕಟಮಾಡಿದೆ. 2022ರ ಸಾಲಿನಲ್ಲಿ ಕರ್ನಾಟಕದ ಐವರಿಗೆ ಪ್ರದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ.
73ನೇ ಗಣರಾಜ್ಯೋತ್ಸವ ದಿನಾಚರಣೆಯಂದು ಕೇಂದ್ರ ಗೃಹಸಚಿವಾಲಯ 2022ನೇ ಸಾಲಿನ ಪದ್ಮವಿಭೂಷಣ, ಪದ್ಮ ಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಿದೆ. ಈ ಬಾರಿ ನಾಲ್ವರಿಗೆ ಪದ್ಮವಿಭೂಷಣ, 17ಮಂದಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿದ್ದು, ಕರ್ನಾಟಕದ ಅಮೈ ಮಹಾಲಿಂಗ ನಾಯ್ಕ್, ಹೆಚ್.ಆರ್.ಕೇಶವಮೂರ್ತಿ, ಸುಬ್ಬಣ್ಣ ಅಯ್ಯಪ್ಪನ್, ಅಬ್ದುಲ್ ಖಾದರ್ ನಡಕಟ್ಟಿನ್ ಮತ್ತು ಮರಣೋತ್ತರವಾಗಿ ಸಾಹಿತಿ ಸಿದ್ದ ಲಿಂಗಯ್ಯನವರು ಪದ್ಮಶ್ರೀ ಪ್ರಶಸ್ತಿಗೆ ಭಾಜನಾರಾಗಿದ್ದಾರೆ.
ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಮೂರು ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡಲಾಗಿದ್ದು, ಈ ವರ್ಷ ಒಟ್ಟು 128 ಮಂದಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಕಲೆ, ಸಾಮಾಜಿಕ ಕೆಲಸ, ಸಾರ್ವಜನಿಕ ವ್ಯವಹಾರ, ವಿಜ್ಞಾನ ಮತ್ತು ತಂತ್ರಜ್ಞಾನ, ವ್ಯಾಪಾರ ಮತ್ತು ಉದ್ಯಮ, ವೈದ್ಯಕೀಯ ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ.