ಉಡುಪಿ: ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಕರ್ನಾಟಕ ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ “3ನೇ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಗೇಮ್ಸ್ ಉಡುಪಿ 2022” ಕಾರ್ಯಕ್ರಮಕ್ಕೆ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಚಾಲನೆ ನೀಡಲಾಯಿತು.
ಈ ಸಂದರ್ಭ ಶಾಸಕ ಕೆ.ರಘುಪತಿ ಭಟ್, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಎಚ್.ಎಸ್.ಬಲ್ಲಾಲ್, ಅಂಬಲಪಾಡಿ ಮಹಾಕಾಳಿ ಜನಾರ್ದನ ದೇವಸ್ಥಾನದ ಧರ್ಮದರ್ಶಿ ಎನ್.ವಿಜಯ್ ಬಲ್ಲಾಳ್, ಯು.ಡಿ.ಎ.ಎ.ಎ ಸಲಹೆಗಾರ ಅಶೋಕ್ ಅಡ್ಯಂತಾಯ, ಡಿಸ್ಟಿಕ್ ಹೋಂ ಕಮಾಂಡೆಂಟ್ ಡಾ.ಪ್ರಶಾಂತ್, ಇಂಡಿಯನ್ ರೈಲ್ವೆಸ್ ಇಂಟರ್ನ್ಯಾಷನಲ್ ಅಥ್ಲೆಟ್ ಪ್ರಿಯದರ್ಶಿನಿ, ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಹಾಗೂ ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಉಡುಪಿ ಜಿಲ್ಲೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.