ಕಾರ್ಕಳ: ಕಾರ್ಕಳ ಪುರಸಭಾ ಕಾರ್ಯಾಲಯದಲ್ಲಿ ಪುರಸಭಾ ವತಿಯಿಂದ 73 ನೇ ಗಣಾರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಗಣರಾಜ್ಯೋತ್ಸವದ ಅಂಗವಾಗಿ ಪುರಸಭಾ ಮುಖ್ಯ ಅಧಿಕಾರಿ ರೂಪ ಶೆಟ್ಟಿಯವರು ದ್ವಜಾರೋಹಣ ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.