ಸರಾಸರಿ 30-35 ಪರ್ಸೆಂಟ್ ಅಪಘಾತ ಪ್ರಕರಣವು ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದಂದು ವರದಿಯಾಗಿದ್ದು, ಈ ರಸ್ತೆ ಅಪಘಾತಗಳಿಗೆ ಒಳಗಾದವರನ್ನು ಕಾಪಾಡುವುದಕ್ಕಾಗಿ ಹಾಗೂ ಜೀವ ಹಾನಿಯನ್ನು ತಡೆಯುವ ಸಲುವಾಗಿ 108 ಆರೋಗ್ಯ ಕವಚ ಅಂಬುಲೆನ್ಸ್ ಕರ್ನಾಟಕ ರಾಜ್ಯಾದ್ಯಂತ ಸುಸರ್ಜಿತ ಗೊಂಡಿರುತ್ತದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ 108 ಅಂಬುಲೆನ್ಸ್ ಸೇವೆಯು ನಿಕಟ ಸಹಕಾರವನ್ನು ಹೊಂದಿರುತ್ತದೆ. ಹೆಚ್ಚಿನ ತುರ್ತುಪರಿಸ್ಥಿತಿ ಒದಗಬಹುದಾದ ಪ್ರದೇಶಗಳಲ್ಲಿ ಹೆಚ್ಚುವರಿ ಅಂಬುಲೆನ್ಸ್ ಗಳನ್ನು ನಿಯೋಜಿಸಲಾಗುವುದು. ಈ ಸಮಯದಲ್ಲಿ ಹೆಚ್ಚುವರಿ ಆಂಬುಲೆನ್ಸ್ ಸಿಬ್ಬಂದಿಗಳ ಅವಶ್ಯಕತೆ ಇರುವುದರಿಂದ ಸಿಬ್ಬಂದಿಯ ಸಾಪ್ತಾಯಿಕ ರಜೆಯನ್ನು ರದ್ದುಗೊಳಿಸಲಾಗಿದೆ. ಇಂಧನ , ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಆಂಬುಲೆನ್ಸ್ ನಲ್ಲಿ ಮುಂಜಾಗೃತ ಕ್ರಮವಾಗಿ ಇರಿಸಲಾಗಿದೆ.
ಜಿಲ್ಲೆಯಲ್ಲಿ ತಜ್ಞ ಸಿಬ್ಬಂದಿಗಳೊಂದಿಗೆ 18 ಅಂಬುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಜಿಲ್ಲಾ ವ್ಯವಸ್ಥಾಪಕರಾದ ಮಹಾಬಲ ಅವರು ತುರ್ತು ಪರಿಸ್ಥಿತಿಗಳಲ್ಲಿ 108 ಫ್ರೀ ಸಂಖ್ಯೆಗೆ ಡಯಲ್ ಮಾಡಬಹುದು ಎಂದು ತಿಳಿಸಿದ್ದಾರೆ. ನೋವಿನಲ್ಲಿ ನರಳಾಡುತ್ತಿರುವ ಗಾಯಾಳುಗಳನ್ನು
ಸುರಕ್ಷಿತವಾಗಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತಲುಪಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು ಜಿವಿಕೆ ಇ.ಮ್.ಆರ್.ಐ 108 ಮಹಾಬಲ ಅವರನ್ನು ಸಂಪರ್ಕಿಸಬಹುದಾಗಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ 7022099108.