ಬಾಗಲಕೋಟೆ: ಮುಷ್ಕರ, ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಾರಿಗೆ ನೌಕರರನ್ನು ವಜಾಗೊಳಿಸಲಾಗಿತ್ತು. ಇದೀಗ ವಜಾಗೊಂಡಿರುವ ಸಾರಿಗೆ ನೌಕರರ ಕುಟುಂಬದ ಸ್ಥಿತಿ ಗತಿ ನೋಡಿ ಅವರನ್ನು ಮರಳಿ ಸೇರ್ಪಡೆ ಮಾಡಿಕೊಳ್ಳಲು ನಾಲ್ಕು ವಾರ ಅವಕಾಶ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದ್ದಾರೆ.
ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ನೌಕರರು ಮುಷ್ಕರ ಮಾಡುವ ಬದಲು ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸೌಹಾರ್ದಯುತವಾಗಿ ಬೇಡಿಕೆಯನ್ನು ಈಡೇರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.