ಬೆಂಗಳೂರು: ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರದಂದು 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ.
ಮಾರ್ಚ್ 28 ಕ್ಕೆ ಪ್ರಥಮ ಭಾಷೆ, ಮಾರ್ಚ್ 30ಕ್ಕೆ ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4ಕ್ಕೆ ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6ಕ್ಕೆ ಸಮಾಜ ವಿಜ್ಞಾನ, ಏಪ್ರಿಲ್ 6ಕ್ಕೆ ತೃತೀಯ ಭಾಷೆ, ಏಪ್ರಿಲ್ 11ಕ್ಕೆ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ. ಹೀಗೆ ತಾತ್ಕಾಲಿಕ ವೇಳಾಪಟ್ಟಿಯ ಅನುಸಾರ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆಗಳು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರ ತನಕ ನಡೆಯಲಿದ್ದು, ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುತ್ತದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.
ವೇಳಾಪಟ್ಟಿಯ ಕುರಿತು ಅಭ್ಯರ್ಥಿಗಳ ಅಥವಾ ಪೋಷಕರ ಯಾವುದೇ ಆಕ್ಷೇಪಣೆ ಇದ್ದಲ್ಲಿ ಮಂಡಳಿಯ ವೆಬ್ಸೈಟ್ನಲ್ಲಿ ಸಲ್ಲಿಸಬಹುದು. ಜನವರಿ 6 ರಿಂದ 14 ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇದೆ.