ಸರ್ಕಾರವು ಕೊವಿಡ್ ನಿಂದ ಶಾಲೆಗಳನ್ನು ಪುನಃ ಬಂದ್ ಆದರೆ ವಿದ್ಯಾಗಮ ಯೋಜನೆಯನ್ನು ಜಾರಿಗೆ ತರಲು ನಿರ್ಧಾರ ಮಾಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂದು ಪರ್ಯಾಯ ಶಿಕ್ಷಣ ಕ್ರಮ ಅಂದರೆ ಮತ್ತೆ ವಿದ್ಯಾಗಮ ಯೋಜನೆಯ ಜಾರಿಗೆ ಮುಂದಾಗಿದೆ. ಎಲ್ಲ ಶಿಕ್ಷಣ ಅಧಿಕಾರಿಗಳು ವಿದ್ಯಾಗಮ ಯೋಜನೆಯ ಜಾರಿಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಕೊವಿಡ್ ನಿಂದಾಗಿ ಬೆಂಗಳೂರಿನಲ್ಲಿ ಮಾತ್ರ 1 – 9ನೇ ತರಗತಿವರೆಗಿನ ಶಾಲೆ ಬಂದ್ ಮಾಡಲಾಗಿದೆ.
ರಾಜ್ಯದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಶಾಲೆಗಳನ್ನು ಮುಚ್ಚುವ ಆತಂಕ ಉಂಟಾಗಿದೆ. ಆದ್ದರಿಂದ ಶಿಕ್ಷಣ ಇಲಾಖೆ ಪರ್ಯಾಯ ಶಿಕ್ಷಣದ ಮೊರೆ ಹೋಗಲಿದೆ. ಈಗಾಗಲೆ ಬೆಂಗಳೂರಿನಲ್ಲಿ ಕೆಲವು ಖಾಸಗಿ ಶಾಲೆಗಳು ಆನ್ಲೈನ್ ತರಗತಿಗಳು ನಡೆಯುತ್ತಿವೆ.