ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವು 2021 ರ ಜನವರಿ – ಡಿಸೆಂಬರ್ ಅವಧಿಯ ವರೆಗೆ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಕನ್ನಡ ಪುಸ್ತಕ ಸೊಗಸು-2021 ಬಹುಮಾನವನ್ನು ಆಯ್ಕೆಯಾದ ಕೃತಿಗಳ ಪ್ರಕಾಶಕರು, ಮುದ್ರಕರು, ಕಲಾವಿದರಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ನೀಡುತ್ತದೆ.
ಫೆಬ್ರವರಿ 10 ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಈ ವಿಳಾಸಕ್ಕೆ ಪುಸ್ತಕದ ಹೆಸರು, ಲೇಖಕರ ಹೆಸರು, ಪುಸ್ತಕ ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ, ಈ ಎಲ್ಲಾ ವಿವರದೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಕಳುಹಿಸಬೇಕು. ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಪ್ರಕಾಶಕರು, ಮುದ್ರಕರು, ಕಲಾವಿದರು ಅಥವಾ ಲೇಖಕರು ಸ್ವಯಂ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು, ವೆಬ್ಸೈಟ್ www.kannadapustakapradhikara.com ಹಾಗೂ ದೂರವಾಣಿ ಸಂಖ್ಯೆ: 080-22484516 / 22107704 ನ್ನು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.