ಧಾರವಾಡ: ಜಿಲ್ಲೆಯ ಎಸ್ಡಿಎಂ ಆಸ್ಪತ್ರೆಗೆ ಖ್ಯಾತ ಕವಿ ಚೆನ್ನವೀರ ಕಣವಿ ಅವರನ್ನು ಕೊರೋನಾ ಸೋಂಕು ತಗುಲಿದ ಕಾರಣ ದಾಖಲೆ ಮಾಡಲಾಗಿತ್ತು. ಇದೀಗ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ.
ಎಸ್ಡಿಎಂ ಆಸ್ಪತ್ರೆಯ ವೈದ್ಯರು ಕಣವಿ ಅವರಿಗೆ ನೀಡುತ್ತಿರುವ ಆಮ್ಲಜನಕ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದು ಅವರನ್ನು ಜನವರಿ 14ರಂದು ಎಸ್ಡಿಎಂ ಆಸ್ಪತ್ರೆಗೆ ದಾಖಲೆ ಮಾಡಲಾಗಿತ್ತು. ಹಾಗೂ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ತದನಂತರ ಅವರಿಗೆ ನಿರಂತರವಾಗಿ ವೈದ್ಯಕೀಯ ಆಮ್ಲಜನಕವನ್ನು ನೀಡಲಾಗುತ್ತಿದೆ. ಧಾರವಾಡ ಜಿಲ್ಲಾಡಳಿತವು ಅವರ ಆಸ್ಪತ್ರೆಯ ವೆಚ್ಚ ಭರಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕವಿ ಕಣವಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರು ಪತ್ರ ಬರೆದಿದ್ದರು.