Saturday, June 7, 2025

‘ಗರುಡ ಗಮನ ವೃಷಭ ವಾಹನ’ ಸಿನಿಮಾ ಬಗ್ಗೆ ರಾಣಾ ದಗ್ಗುಬಾಟಿ ಹೇಳಿದ್ದೇನು?

ರಾಜ್​ ಬಿ. ಶೆಟ್ಟಿ ಅವರು ತಮ್ಮ ವಿಭಿನ್ನ ನಟನೆ ಹಾಗೂ ನಿರ್ದೇಶನದ ಮಾಡುವ ಮೂಲಕ ಪ್ರಸಿದ್ಧರಾದವರು. ಕಳೆದ ವರ್ಷ ಬಿಡುಗಡೆಯಾದ ‘ಗರುಡ ಗಮನ ವೃಷಭ ವಾಹನ’ ಸಿನಿಮಾಗೆ ದೇಶಾದ್ಯಂತ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾವು ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡಿತ್ತು. ನಂತರ ಒಟಿಟಿ ಪ್ಲಾಟ್​ಫಾರ್ಮ್​ ನಲ್ಲೂ ಭಾರೀ ಮೊತ್ತಕ್ಕೆ ಈ ಸಿನಿಮಾ ಸೇಲ್ ಆಗಿತ್ತು. ಈ ಸಿನಿಮಾಗೆ ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಟಾಲಿವುಡ್​ ನಟ ರಾಣಾ ದಗ್ಗುಬಾಟಿ ಅವರು ಕೂಡ ಸಿನಿಮಾವನ್ನು ಮೆಚ್ಚಿಕೊಂಡಿದ್ದೆ. ಇತ್ತೀಚಿನ ಕೆಲ ಕನ್ನಡ ಸಿನಿಮಾಗಳು ಕನ್ನಡ ಚಿತ್ರರಂಗದತ್ತ ಪರಭಾಷೆ ಪ್ರೇಕ್ಷಕರ ಗಮನ ಸೆಳೆಯುವಂತೆ ಮಾಡುತ್ತಿದೆ.

ಒಟಿಟಿ ಪ್ಲಾಟ್​ಫಾರ್ಮ್ ಜೀ5ನಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾವು ಬಿಡುಗಡೆಯಾದ ನಂತರ ಬೇರೆ ಬೇರೆ ರಾಜ್ಯದ ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಯೂಟ್ಯೂಬ್​ನಲ್ಲಿ ಸಹ ಹಲವರು ಸಿನಿಮಾವನ್ನು ವಿಮರ್ಶಿಸಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ​ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

ರಾಣಾ ದಗ್ಗುಬಾಟಿ ಅವರಿಗೆ ಅಭಿಮಾನಿಯೊಬ್ಬರು ‘ರಾಣಾ ದಗ್ಗುಬಾಟಿ ಅವರೇ, ದಯವಿಟ್ಟು ನೀವು ಸ್ವಲ್ಪ ಬಿಡುವು ಮಾಡಿಕೊಂಡು ಈ ಸಿನಿಮಾ ನೋಡಿ. ನಿಮ್ಮ ಅಭಿಪ್ರಾಯ ತಿಳಿಸಬೇಕೆಂದು ಬಯಸುತ್ತೇನೆ’ ಎಂದು ಟ್ವೀಟ್​ ಮಾಡಿದ್ದರು. ಇದಕ್ಕೆ ಉತ್ತರವಾಗಿ ರಾಣಾ ‘ಇದು ಅದ್ಭುತವಾಗಿದೆ. ತುಂಬ ಇಷ್ಟಪಟ್ಟಿದ್ದೇನೆ’ ಎಂದು ಟ್ವೀಟ್​ ಮಾಡಿದ್ದಾರೆ.

ಈ ಸಿನಿಮಾವು ಜನವರಿ 13ರಂದು ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಬಿಡುಗಡೆಯಾದ ಕೇವಲ ಮೂರು ದಿನಗಳಲ್ಲಿ ಬರೋಬ್ಬರಿ 8 ಕೋಟಿ ನಿಮಿಷಗಳ ವೀಕ್ಷಣೆ ಕಾಣುವ ಮೂಲಕ ಒಟಿಟಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles