Saturday, June 7, 2025

ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ರದ್ದು, ನೈಟ್ ಕರ್ಫ್ಯೂ ಮುಂದುವರಿಕೆ:ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ಮಹತ್ತರವಾದ ಬದಲಾವಣೆಯಾಗಿದೆ. ಸಿಎಂ ಗ್ರಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿ, ನೈಟ್ ಕರ್ಫ್ಯೂವನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ.


ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ ಇದಕ್ಕೆ ಕಡಿವಾಣ ಹಾಕಲು ರಾಜ್ಯಸರ್ಕಾರ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿ ಆದೇಶ ಹೊರಡಿಸಿತ್ತು. ಆದರೆ, ಹೋಟೆಲ್ ಉದ್ಯಮಿಗಳು ಸೇರಿದಂತೆ ಸಾರ್ವಜನಿಕರು ಇದಕ್ಕೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದರು. ಅಲ್ಲದೇ, ತಾಂತ್ರಿಕ ಸಲಹಾ ಸಮಿತಿಯು ಕೂಡ ವಾರಾಂತ್ಯ ಕರ್ಫ್ಯೂವನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು, ಇದರೊಂದಿಗೆ ಕೊರೊನಾ ತಡೆಗೆ ವೀಕೆಂಡ್ ಕರ್ಫ್ಯೂ ಬದಲಾಗಿ ಇತರೆ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಮಿತಿಯು ಸೂಚನೆಯನ್ನು ನೀಡಿತ್ತು. ಈ ಸಲಹೆಯನ್ನು ಪರಿಗಣನೆಗೆ ತೆಗದುಕೊಂಡ ಸರ್ಕಾರ ಇದೀಗ ವಾರಾಂತ್ಯ ಕರ್ಫ್ಯೂವನ್ನು ರದ್ದುಪಡಿಸಿ, ನೈಟ್ ಕರ್ಫ್ಯೂವನ್ನು ಮಾತ್ರ ಮುಂದುವರಿಸಲು ನಿರ್ಧಾರ ಮಾಡಿದೆ ಎನ್ನಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles