ಬೆಂಗಳೂರು: ಇಂದು ಸಿ ಎಂ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ರಾಜ್ಯ ಸರ್ಕಾರವು ಬೆಂಗಳೂರು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲೆಗಳನ್ನು ಪ್ರಾರಂಭ ಮಾಡಲು ನಿರ್ಧಾರ ಮಾಡಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಜನವರಿ 29 ರ ವರೆಗೆ ಶಾಲೆಗಳನ್ನು ಬಂದ್ ಮಾಡಲು ನಿರ್ಧರಿಸಿದೆ. ಪುನಃ ಬೆಂಗಳೂರಿನಲ್ಲಿ ಶಾಲೆಗಳನ್ನು ತೆರೆಯುವ ಕುರಿತು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಸೋಂಕು ಹೆಚ್ಚಾದರೆ 3 ದಿನ ಅಥವಾ 7 ದಿನ ಮಾತ್ರ ಶಾಲೆಗಳನ್ನು ಬಂದ್ ಮಾಡಲಾಗುತ್ತದೆ. ಇನ್ನು ಶಾಲೆಗಳನ್ನು ಬಂದ್ ಮಾಡುವುದರ ಕುರಿತು ಸ್ಥಳೀಯ ಅಧಿಕಾರಿಗಳು ನಿರ್ಧಾರ ಮಾಡುತ್ತಾರೆ. ಈವರೆಗೆ ರಾಜ್ಯದಲ್ಲಿ ಇದುವರೆಗೆ 5 ಲಕ್ಷಕ್ಕಿಂತ ಹೆಚ್ಚು ಮಕ್ಕಳಿಗೆ ಕೊವಿಡ್ ಪರೀಕ್ಷೆ ಮಾಡಲಾಗಿದ್ದು, ಇವರಲ್ಲಿ ಶೇ.5ರಷ್ಟು ಮಕ್ಕಳಲ್ಲಿ ಮಾತ್ರ ಸೋಂಕು ದೃಢಪಟ್ಟಿದೆ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.