ಬೆಂಗಳೂರು: ರಾಜ್ಯ ಸರ್ಕಾರವು ಇನಾಂ ಜಮೀನುಗಳ ಮರು ಮಂಜೂರಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಒಂದು ವರ್ಷ ವಿಸ್ತರಿಸುವ ಮೂಲಕ ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದೆ.
ರಾಜ್ಯಪಾಲರು ಇನಾಂ ಜಮೀನುಗಳ ಮರು ಮಂಜೂರಾತಿ ತಿದ್ದುಪಡಿ ಮಸೂದೆಗೆ ಸಹಿ ಹಾಕಿದ್ದು. ಇನಾಂ ಜಮೀನುಗಳ ಮರು ಮಂಜೂರಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಒಂದು ವರ್ಷ ವಿಸ್ತರಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್ ಅವರು 70 ಸಾವಿರ ಇನಾಂ ಜಮೀನು ರಾಜ್ಯದಲ್ಲಿದೆ. ನೂರಾರು ಎಕರೆ ಜಮೀನುಗಳನ್ನು ಈ ಹಿಂದೆ ರಾಜ-ಮಹಾರಾಜರ ಹಾಗೂ ಬ್ರಿಟೀಷರ ಕಾಲದಲ್ಲಿ ಹಲವಾರು ಜನರಿಗೆ ನೀಡಲಾಗಿತ್ತು. ಈ ಜಮೀನುಗಳಿಗೆ ಸರ್ಕಾರವು ಪಹಣಿಯನ್ನು ನೀಡುತ್ತಿತ್ತು ಎಂದು ತಿಳಿಸಿದ್ದಾರೆ.