Sunday, June 8, 2025

ಕಿತ್ತೋಗಿರುವ ರಸ್ತೆಗೆ ಪ್ಯಾಚ್ ವರ್ಕ್ ಮಾಡಿಕೊಡುವಂತೆ ಸ್ಥಳೀಯರ ಆಗ್ರಹ

ಕಾರ್ಕಳ:ಕಾರ್ಕಳ ಪುರಸಭಾ ವ್ಯಾಪ್ತಿಯ ತೆಳ್ಳಾರು ಗಜರಿಯಾ ಆಸ್ಪತ್ರೆಗೆ ಸಾಗುವ ಪ್ರಮುಖ ರಸ್ತೆಯಲ್ಲಿ ಹೊಂಡಗುಂಡಿ ನಿರ್ಮಾಣದ ಪರಿಣಾಮ ಸಂಚಾರಕ್ಕೆ ಈ ರಸ್ತೆ ಅಯೋಗ್ಯವಾಗಿದ್ದ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಥಳೀಯರು ಪುರಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ನೂತನವಾಗಿ ನಿರ್ಮಾಣವಾಗಿರುವ ಮೋರಿ ಕಾಮಗಾರಿಯು ಅವೈಜ್ಞಾನಿಕತೆಯಿಂದ ಕೂಡಿದೆ ಎಂದು ಸಾರ್ವಜನಿಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ರಸ್ತೆಗಳಲ್ಲಿ ಹೊಂಡಗುಂಡಿ ನಿರ್ಮಾಣವಾದ ಪರಿಣಾಮ ವಾಹನ ಸಂಚಾರದಲ್ಲಿ ಅಪಾಯವನ್ನು ಉಂಟುಮಾಡುತ್ತಿದೆ. ರಸ್ತೆಗಳಲ್ಲಿ ನಿರ್ಮಾಣವಾಗಿರುವ ಹೊಂಡಗುಂಡಿಗಳನ್ನು ತಪ್ಪಿಸುವ ಭರಾಟೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.


ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ರಸ್ತೆಯಲ್ಲಿ ನಿರ್ಮಾಣವಾಗಿರುವ ಹೊಂಡಗಳನ್ನು ಮುಚ್ಚುವಂತಹ ಕೆಲಸ ಹಾಗೂ ಪ್ಯಾಚ್ ವರ್ಕ್ ಗಳನ್ನು ಕೂಡಲೇ ಮಾಡಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು, ಕೂಡಲೇ ಪ್ಯಾಚ್ ವರ್ಕ್ ಮಾಡಿಸುತ್ತೇನೆ.
ರೂಪಾ ಶೆಟ್ಟಿ(ಪುರಸಭೆ ಮುಖ್ಯ ಅಧಿಕಾರಿ)

ವರದಿ:ವೀಣಾ ಸುಕೇಶ್‌ ಕಲ್ಯ

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles