Sunday, June 8, 2025

ಭ್ರಷ್ಟಾಚಾರದ ಆರೋಪದ ಬಗ್ಗೆ ಕೊನೆಗೂ ಮೌನ ಮುರಿದ ರವಿ ಡಿ ಚೆನ್ನಣ್ಣನವರ್

ಬೆಂಗಳೂರು: ಇತ್ತೀಚೆಗೆ ಸಾಕಷ್ಟು ಆರೋಪ ಹಾಗೂ ವಿವಾದಗಳಿಗೆ ಈಡಾಗಿದ್ದ ಹಿರಿಯ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣವರ್ ಇದೀಗ ಮೌನ ಮುರಿದು ತಮ್ಮ ಮೇಲಿನ ಆರೋಪಗಳೆಲ್ಲವೂ ಸುಳ್ಳು , ಇದು ದುರುದ್ದೇಶದಿಂದ ಕೂಡಿದೆ ಎಂದು ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ರವಿ ಡಿ ಚೆನ್ನಣ್ಣನವರ್ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಇದು ನನ್ನ ಗಮನಕ್ಕೆ ಬಂದಿದ್ದು ಈ ಆರೋಪಗಳೆಲ್ಲವೂ ಸುಳ್ಳಾಗಿದೆ. ನನ್ನ ತಂದೆ ತಾಯಿಯ ಹೆಸರಿನಲ್ಲಿರುವ ಕೆಲ ಪಹಣಿ ಹಾಕಿ ಆರೋಪಿಸಿದ್ದು, ಅವೆಲ್ಲವೂ ಕಾನೂನು ಬದ್ಧವಾಗಿಯೇ ಖರೀದಿಸಿರುವುದು, ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅವುಗಳನ್ನೆಲ್ಲಾ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದೇವೆ.

ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನ ತೇಜೋವಧೆ ಮಾಡುತ್ತಿದ್ದಾರೆ. ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾಗಿರುವುದು ನನ್ನ ಕರ್ತವ್ಯ. ಹೀಗಾಗಿ ಇದ್ಯಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಕ್ರಮಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles