ಬೆಂಗಳೂರು: ‘ಆತ್ಮನಿರ್ಭರ ಅರ್ಥ ವ್ಯವಸ್ಥೆ’ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಭಾಷಣ ಮಾಡಲಿದ್ದು, ಭಾಷಣದ ನೇರಪ್ರಸಾರ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯ ಬಿಜೆಪಿ ಕಚೇರಿಯಿಂದಲೇ ಪ್ರಧಾನಿಯವರ ಭಾಷಣದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದು ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಿಎಂ ಬೊಮ್ಮಾಯಿ ಬಿಜೆಪಿ ಕಚೇರಿಯಿಂದ ಪ್ರಧಾನಿಯವರ ಭಾಷಣದಲ್ಲಿ ಭಾಗವಹಿಸಲಿದ್ದಾರೆ.