ಉಡುಪಿ: ಉಡುಪಿಯ ಪ್ರತಿಷ್ಠಿತ ಡ್ರೈ ಫ್ರೂಟ್ಸ್ ಮಾರಾಟ ಮಳಿಗೆಯ ಮಾಲಕರ ಮಗ ಅಂಬಲಪಾಡಿಯ ಮಜ್ಜಿಗೆ ಪಾದೆಯಲ್ಲಿರುವ ತಮ್ಮ ವಸತಿ ಸಮ್ಮುಚ್ಚಯದಲ್ಲಿ ನೇಣಿಗೆ ಶರಣಾಗಿರುವ ಘಟನೆ ಬುಧವಾರ ನಡೆದಿದೆ.
ಮೃತರನ್ನು ಕಾರ್ತಿಕ್ ಪೈ(37) ಎಂದು ಗುರುತಿಸಲಾಗಿದ್ದು, ಮದುವೆಯಾಗಿ ಐದು ವರ್ಷವಾದರೂ ಮಕ್ಕಳಾಗದ ಕಾರಣ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.