Sunday, June 8, 2025

ಹೊಸ ನಿಯಮ ಜಾರಿಯಾಗುವವರೆಗೆ ಟೋಯಿಂಗ್ ಸ್ಥಗಿತ: ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಟೊಯಿಂಗ್ ನೆಪದಲ್ಲಿ ಸಂಚಾರಿ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಬಹಳಷ್ಟು ಟೀಕೆಗಳು ಹರಿದಾಡುತ್ತಿದ್ದವು. ಈ ಹಿನ್ನಲೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳೊಂದಿಗೆ ನಿನ್ನೆ ಸಭೆ ನಡೆಸಿದ್ದರು.

ಸಭೆಯ ನಂತರ ಪ್ರತಿಕ್ರಿಯೆ ನೀಡಿದ ಸಚಿವ ಅರಗ ಜ್ಞಾನೇಂದ್ರ ಅವರು ಸಾರ್ವಜನಿಕರಿಗೆ ಕಿರಿ ಕಿರಿಯಾಗದಂತೆ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ಸುಗಮ ವ್ಯವಸ್ಥೆ ಮಾಡಿಕೊಡುವುದು ನಮ್ಮ ಆದ್ಯತೆಯಾಗಿದೆ. ರಾಜಧಾನಿಯಲ್ಲಿ ಹೊಸ ಸರಳೀಕೃತ ನಿಯಮಗಳನ್ನು ಜಾರಿ ಮಾಡುವವರೆಗೆ ವಾಹನಗಳ ಮೇಲಿನ ಟೋಯಿಂಗ್ ಅನ್ನು ನಿಲ್ಲಿಸಲಾಗುತ್ತದೆ. ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡಿ ಇನ್ನು 15 ದಿನಗಳಲ್ಲಿ ಹೊಸ ನಿಯಮಗಳನ್ನು ಜಾರಿ ಮಾಡುತ್ತೇವೆ ಎಂದು ಹೇಳಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles