Saturday, June 7, 2025

ನಟ ಪುನೀತ್‌ ನಿವಾಸಕ್ಕೆ ತೆಲುಗು ನಟ ಅಲ್ಲು ಅರ್ಜುನ್ ಭೇಟಿ: ಅಪ್ಪು ಭಾವಚಿತ್ರಕ್ಕೆ ಪುಷ್ಪ ನಮನ

ಬೆಂಗಳೂರು: ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ಗುರುವಾರ ಕಂಠೀರವ ಸ್ಟುಡಿಯೋದಲ್ಲಿರುವ ನಟ ಪುನೀತ್‌ ರಾಜ್‌ಕುಮಾರ್ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿ ಭಾವುಕರಾದರು.

ಅಪ್ಪು ಸಮಾಧಿಗೆ ಭೇಟಿ ನೀಡುವ ಮೊದಲು ಬೆಂಗಳೂರಿನ ಸದಾಶಿವನಗರದಲ್ಲಿರುವ ನಟ ಪುನೀತ್‌ ರಾಜ್‌ಕುಮಾರ್‌ ನಿವಾಸಕ್ಕೆ ತೆರಳಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಸಾಂತ್ವಾನ ಹೇಳಿ, ಮನೆಯಲ್ಲಿದ್ದ ಅಪ್ಪು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ನಟ ಶಿವರಾಜ್‌ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಲ್ಲು ಅರ್ಜುನ್‌ “ಪುನೀತ್‌ ಇನ್ನಿಲ್ಲ ಎಂಬ ವಿಚಾರ ಅರಗಿಸಿಕೊಳ್ಳಲಾಗುತ್ತಿಲ್ಲ. ನಾನು ಬೆಂಗಳೂರಿಗೆ ಬಂದಾಗ ಅವರನ್ನು ಭೆಟಿಯಾಗುತ್ತಿದ್ದೆ. ಅವರು ಹೈದರಾಬಾದ್‌ಗೆ ಬಂದಾಗ ನನ್ನನ್ನು ಭೇಟಿ ಮಾಡುತ್ತಿದ್ದರು. ಕೊರೊನಾ ಹಿನ್ನೆಲೆ ಇತ್ತೀಚೆಗೆ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ, ಇದೀಗ ಅವರು ಬಾರದ ಲೋಕಕ್ಕೆ ತೆರಳಿದ್ದಾರೆ ಎಂದು ಭಾವುಕವಾಗಿ ನುಡಿದರು.

ಅಲ್ಲು ಅರ್ಜುನ್‌ ಅವರು ಡಿಸೆಂಬರ್‌ನಲ್ಲಿ ಪುಷ್ಪ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಆದರೆ ಅಂದು ಅವರು ಪುನೀತ್‌ ನಿವಾಸಕ್ಕೆ ಭೇಟಿ ಕೊಟ್ಟಿರಲಿಲ್ಲ. ಇನ್ನೊಂದು ದಿನ ಬೆಂಗಳೂರಿಗೆ ಆಗಮಿಸಿ ನಟ ಪುನೀತ್‌ ಅವರ ನಿವಾಸಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು ಬೆಂಗಳೂರಿಗೆ ಬಂದಿರುವ ನಟ ಅಲ್ಲು ಅರ್ಜುನ್ ಪುನೀತ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles