Monday, June 9, 2025

ಉಡುಪಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಪ್ರಕರಣ:ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಬೆಂಗಳೂರು: ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈ ಕೋರ್ಟ್ ಫೆಬ್ರವರಿ 4 ರಂದು ನೋಟಿಸ್ ಜಾರಿ ಮಾಡಿದೆ.


ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ಗೆ ಸಲ್ಲಿಸಿರುವ ಮನವಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು. ಈ ಮಧ್ಯೆ ಉಡುಪಿ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ರೇಶಮ್ ಅವರು ಪ್ರತ್ಯೇಕವಾಗಿ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ಕೂಡ ನ್ಯಾಯಾಲಯ ನಡೆಸಿತು.


ವಿದ್ಯಾರ್ಥಿಗಳು ಸಲ್ಲಿಸಿರುವ ಮನವಿಯಲ್ಲಿ ಪ್ರತಿವಾದಿಗಳಾಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕರು, ಉಡುಪಿ ಜಿಲ್ಲಾಧಿಕಾರಿ, ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಿಗೆ ನ್ಯಾಯಾಲಯವು ನೋಟಿಸ್ ಜಾರಿ ಮಾಡಿ ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿ, ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles