Monday, June 9, 2025

ಹಿಜಾಬ್ ವಿವಾದ ಬಹಳ ವ್ಯವಸ್ಥಿತವಾದ ಷಡ್ಯಂತ್ರ: ಸಚಿವ ಸುನಿಲ್ ಕುಮಾರ್

ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಬಹಳ ವ್ಯವಸ್ಥಿತವಾದ ಷಡ್ಯಂತ್ರವಾಗಿದೆ. ರಾಜ್ಯಾದ್ಯಂತ ಶಾಲೆಯಲ್ಲಿ ವಸ್ತ್ರಸಂಹಿತೆ ಸಾಂಪ್ರದಾಯಿಕವಾಗಿ ಬಂದಿದೆ. ಶಾಲೆಯ ಒಳಗೆ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್‌ ಹೇಳಿದರು.

ಹಿಜಾಬ್ ವಿವಾದದ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಹಿಜಾಬ್ ವಿಚಾರವಾಗಿ ಕೆಲ ವಿದ್ಯಾರ್ಥಿಗಳನ್ನು ಮಂದೆ ಬಿಟ್ಟು ಅರಾಜಕತೆ ಸೃಷ್ಟಿ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ. ಸಿದ್ದರಾಮಯ್ಯ ಸೇರಿದಂತೆ ಕೆಲ ಸಂಘಟನೆಗಳು ಹಿಜಾಬ್ ವ್ಯಕ್ತಿ ಸ್ವಾತಂತ್ರ್ಯ ಎಂದು ಹೇಳುತ್ತಿದ್ದಾರೆ. ಇವರ ಹೇಳಿಕೆಯಿಂದ ಇಂತಹ ವಿವಾದಗಳನ್ನು ಸೃಷ್ಟಿ ಮಾಡಬೇಡಿ. ಶಾಲೆಯ ಆವರಣದ ತನಕ ಹಿಜಾಬ್, ಬುರ್ಕಾ ಹಾಕಿಕೊಂಡು ಬಂದು ಶಾಲೆಯ ಗೇಟ್‌ ಒಳಗೆ ಬರುವಾಗ ಅದನ್ನು ತೆಗೆದು ಸಮವಸ್ತ್ರದಲ್ಲೇ ಬರತಕ್ಕದ್ದು ಎಂದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles