ಬೆಂಗಳೂರು: ಇನ್ನು ಮುಂದೆ ಇಂಧನ ಇಲಾಖೆಯ ವಿವಿಧ ಹುದ್ದೆಗಳ ನೇಮಕಕ್ಕೆ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಖಡ್ಡಾಯ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಆಪ್ಟಿಟ್ಯೂಡ್ ಪರೀಕ್ಷೆ ಪಡೆಯುವ ಮುನ್ನ ಕನ್ನಡ ಪರೀಕ್ಷೆ ಬರೆಯುವುದು ಹಾಗೂ ಅದರಲ್ಲಿ ಕನಿಷ್ಠ 50 ಅಂಕವನ್ನು ಪಡೆಯುವು ಕಡ್ಡಾಯ ಎಂದು ಆದೇಶ ನೀಡಲಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಅರ್ಹತಾ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಕನ್ನಡ ಪರೀಕ್ಷೆಯನ್ನು 2015 ರಲ್ಲಿ ವಿವಿಧ ಹುದ್ದೆಗಳ ನೇಮಕದಲ್ಲಿ ವಿನಾಯಿತಿಯನ್ನು ನೀಡಲಾಗಿತ್ತು. ಆದ್ದರಿಂದ ಬೇರೆ ರಾಜ್ಯಗಳ ಅಭ್ಯರ್ಥಿಗಳಿಗೆ ಸಹಾಯವಾಗುತ್ತಿತ್ತು. 60 ಕ್ಕೂ ಹೆಚ್ಚು ಹುದ್ದೆಗಳನ್ನು ಬೇರೆ ರಾಜ್ಯದ ಅಭ್ಯರ್ಥಿಗಳೇ ಪಡೆಯುತ್ತಿದ್ದರು. ಈ ಬಾರಿ ಹೀಗೆ ಆಗಬಾರದು ಎಂಬ ಕಾರಣಕ್ಕೆ ಕೆಪಿಟಿಸಿಎಲ್ ನೇಮಕದಲ್ಲಿ ಕನ್ನಡ ಪರೀಕ್ಷೆ ಕಡ್ಡಾಯ ಮಾಡಲು ಇಂಧನ ಸಚಿವ ವಿ. ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ.