ಧಾರವಾಡ: ಜಿಲ್ಲೆಯ ಎಸ್ಡಿಎಂ ಆಸ್ಪತ್ರೆಯಿಂದ ನಾಡೋಜ ಚೆನ್ನವೀರ ಕಣವಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು ನಾಡೋಜ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ. ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದ್ದು, ಅವರ ಶ್ವಾಸಕೋಶದಲ್ಲಿ ಸೋಂಕು ಹೆಚ್ಚಾಗಿದೆ ಎಂದು ತಿಳಿಸಿದೆ.
ಚೆನ್ನವೀರ ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಹಾಗೂ ಉಸಿರಾಟ ಸಮಸ್ಯೆಯಿಂದ ಜ.14 ರಂದು ಎಸ್ಡಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನಗಳ ಹಿಂದೆ ಇವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಆದರೀಗ ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ನಿಂದ (ARDS) ಚೆನ್ನವೀರ ಕಣವಿ ಬಳಲುತ್ತಿದ್ದು, ಇವರ ಆರೋಗ್ಯ ಕ್ಷೀಣಿಸುತ್ತಿದೆ.