ನವದೆಹಲಿ: ಅಂತರ್ ರಾಜ್ಯ ಜಲವಿವಾದ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ತಜ್ಞರೊಂದಿಗೆ ಸಭೆ ನಡೆಸಲಾಯಿತು.

ಸಭೆಯಲ್ಲಿ ಕಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ನೋಟಿಫಿಕೇಷನ್, ಮೇಕೆದಾಟು ವಿವಾದ, ನದಿ ಜೋಡಣೆ ಕುರಿತು ಕಾನೂನಾತ್ಮಕವಾಗಿ ರಾಜ್ಯ ಹೊಂದಬೇಕಾದ ನಿಲುವು ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.
ಸಭೆಯಲ್ಲಿ ಸಚಿವರಾದ ಜೆ.ಸಿ. ಮಾಧುಸ್ವಾಮಿ, ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ರಾಜ್ಯ ಸರ್ಕಾರದ ಅಡ್ವೋಕೆಟ್ ಜನರಲ್ ಪ್ರಭುಲಿಂಗ ನಾವದಗಿ ಹಾಗೂ ಹಿರಿಯ ಕಾನೂನು ತಜ್ಞರು ಉಪಸ್ಥಿತರಿದ್ದರು.