ಬೆಂಗಳೂರು: ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇಂದು ನಡೆಸಿದ ವಿಚಾರಣೆಯನ್ನು ಮತ್ತೆ ನಾಳೆಗೆ(ಬುಧವಾರ)ಕ್ಕೆ ಮುಂದೂಡಿದೆ.
ಹಿಜಾಬ್ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಯ ವಿಚಾರಣೆಯಲ್ಲಿ ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ ಕಾಮತ್ ಅವರು ವಾದ ಮಂಡಿಸಿದರು. ವಾದ ಪ್ರತಿವಾದದ ನಡುವೆ ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಾಲಯ ನಾಳೆ ಸರ್ಕಾರದ ವಾದ ಮಂಡಿಸಲು ಅವಕಾಶ ನೀಡಿ ಮಧ್ಯಾಹ್ನ ಅರ್ಜಿಯ ವಿಚಾರಣೆಯನ್ನು 2:30ಕ್ಕೆ ಮುಂದೂಡಲಾಯಿತು.