Monday, June 9, 2025

ಮಹಿಳೆಯರು ಚಾಲಕರಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುತ್ತಿರುವು ಸ್ತ್ರೀ ಬಲವರ್ಧನೆಗೆ ಸಾಕ್ಷಿ: ಪ್ರಭಾಕರ ಆಚಾರ್

ಹೆಬ್ರಿ: ತಾಲೂಕಿನ ಪಂಚಾಯತ್ ಸಭಾಂಗಣದಲ್ಲಿ ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರಿಗೆ ಲಘು ವಾಹನ ತರಬೇತಿ ಸಮಾರೋಪ ಸಮಾರಂಭ ನಡೆಯಿತು.

ಶಿಬಿರಾರ್ಥಿಗಳು ಗ್ರಾ.ಪಂ. ಸ್ವಚ್ ಭಾರತ್ ವಾಹನದ ಚಾಲಕರಾಗಿ ಮಾದರಿ ಆಗುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಮುಂದೆ ಬಂದಿರುವುದು ನಿಜವಾಗಿಯೂ ಸ್ತ್ರೀ ಬಲವರ್ಧನೆಗೆ ಸಾಕ್ಷಿಯಾಗಿದೆ ಎಂದು ಜಿ.ಪಂ. ಏನ್ಆರ್‌ಎಲ್‌ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಪಾಪನಾಯಕ್, ಜಿಲ್ಲಾ ವ್ಯವಸ್ಥಾಪಕಿ ನವ್ಯಾ, ಕಾರ್ಕಳ ತಾ.ಪಂ. ಸಹಾಯಕ ಲೆಕ್ಕಾಧಿಕಾರಿ ನಿತಿನ್, ಅಂಬಾ ಪ್ರಸಾದ್ ಡ್ರೈವಿಂಗ್ ತರಬೇತಿ ಸಂಸ್ಥೆಯ ಪ್ರಸಾದ್ ಉಪಸ್ಥಿತರಿದ್ದರು.

ಕಾರ್ಕಳ ತಾಲೂಕಿನ 27 ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರು 30 ದಿನದ ತರಬೇತಿಯನ್ನು ಪಡೆದಿದ್ದು, ಇವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ನಾಯ್ಕ್ ನಿರೂಪಿಸಿದರು. ರುಡ್ ಸೆಟ್ ಸಂಸ್ಥೆಯ ಉಪನ್ಯಾಸಕ ಸಂತೋಷ್ ಸ್ವಾಗತಿಸಿ ವಂದಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles