ಬಂಟ್ವಾಳ: ಪಂಜಿಕಲ್ಲು ಭಗವಾನ್ ಆದಿನಾಥ ಸ್ವಾಮಿ ಬಸದಿಗೆ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು.
ಭಗವಾನ್ ಆದಿನಾಥ ಸ್ವಾಮಿ ಬಸದಿಯಲ್ಲಿ ಸೋಮವಾರ ಸಂಜೆ ಸಮಾರೋಪಗೊಂಡ ನೂತನ ಏಕಶಿಲಾ ಮಾನಸ್ತಂಭದ ಪ್ರತಿಷ್ಠಾಪೂರ್ವ ಪಂಚಕಲ್ಯಾಣ ಮಹೋತ್ಸವದ ಧಾರ್ಮಿಕ ಸಭೆ ನಡೆಯಿತು. ಸಭೆಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಾಸ್ತವಿಕ ಮಾತುಗಳನ್ನಾಡಿದರು.
ಧಾರ್ಮಿಕ ಸಭೆಯಲ್ಲಿ ಸಮಿತಿ ಅಧ್ಯಕ್ಷ ಸುದರ್ಶನ ಜೈನ್ ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.