ಬೆಂಗಳೂರು: ಹಿಜಾಬ್ ಧರಿಸಿ ಕಾಲೇಜು ಪ್ರವೇಶ ಅನುಮತಿ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರ ಮತ್ತೆ ಕೈಗೊಳ್ಳಲಿದೆ.
ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠ ಅರ್ಜಿ ವಿಚಾರಣೆಯನ್ನು ನಡೆಸುತ್ತಿದ್ದು, ನಿನ್ನೆ ಅರ್ಜಿದಾರರ ಪರ ವಕೀಲರ ವಾದ ಮಂಡನೆ ಮುಗಿದಿದೆ. ಇಂದು ಸರ್ಕಾರದ ಪರ ವಕೀಲರು ವಾದ ಮಂಡಿಸಲಿದ್ದಾರೆ. ಹೈಕೋರ್ಟ್ ಇಂದು ಮಧ್ಯಾಹ್ನ 2:30 ನೀಡಲಿರುವ ತೀರ್ಪಿನ ಆಧಾರದ ಮೇಲೆ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ.
ರಾಜ್ಯದ ವಿವಿದೆಡೆ ಕಾಲೇಜುಗಳಲ್ಲಿ ಹಿಜಾಬ್ ಕೇಸರಿ ಶಾಲು ವಿವಾದ ತಾರಕಕ್ಕೇರಿದ ಹಿನ್ನೆಲೆ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ರಜೆ ಘೊಷಣೆ ಮಾಡಲಾಗಿದೆ.