ನವದೆಹಲಿ: ಕರ್ನಾಟಕದಲ್ಲಿ ಹೊತ್ತಿದ ಹಿಜಾಬ್ ವಿವಾದದ ಕಿಡಿ ಇದೀಗ ಇಡೀ ದೇಶವನ್ನು ವ್ಯಾಪಿಸಿದೆ. ದೆಹಲಿಯ ಕರ್ನಾಟಕ ಭವನದ ಎದುರು ಎಐಎಸ್ಎ ಕಾರ್ಯಕರ್ತರು ಮುಸ್ಲಿಂ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ಇಂದು ಪ್ರತಿಭಟನೆ ನಡೆಸಿದರು.
ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್ಎ) ಕಾರ್ಯಕರ್ತರು ಕರ್ನಾಟಕ ರಾಜ್ಯದ ಸಮವಸ್ತ್ರ ನೀತಿಗೆ ವಿರೋಧಿಸಿ ದೆಹಲಿಯ ಕರ್ನಾಟಕ ಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಕರ್ನಾಟಕ ರಾಜ್ಯದ ಸಮವಸ್ತ್ರ ನೀತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.