ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಗಲಭೆಗಳನ್ನು ತಡೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಪದವಿ ಪೂರ್ವ ಕಾಲೇಜುಗಳಿಗೆ ಫೆ.15 ರ ವರೆಗೆ ರಜೆ ವಿಸ್ತರಿಸಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಫೆ.15 ರವರೆಗೆ ರಜೆ ಎಂದು ಘೋಷಿಸಲಾಗಿದೆ.