ಕಾರ್ಕಳ: ಬಾಹುಬಲಿ ಬಗ್ಗೆ ಆಯೂಬ್ ಖಾನ್ ನೀಡಿರುವ ಧರ್ಮ ವಿರೋಧಿ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸದಾಶಿವ ದೇವಾಡಿಗ ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಾಹುಬಲಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆತನಿಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಯಾರೋ ಒಬ್ಬ ತಿಳಿಗೇಡಿ ನೀಡಿರುವ ಹೇಳಿಕೆಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡನ ಹೇಳಿಕೆ ಎಂದು ತಿರುಚಿ ಸಮಾಜದ ದಿಕ್ಕು ತಪ್ಪಿಸಲಾಗುತ್ತಿದೆ. ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷರು ದುರುದ್ದೇಶ ಪೂರಕವಾಗಿ ಇದನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಹುನ್ನಾರ ಮಡುತ್ತಿರುವುದು ವಿಷಾದನೀಯ ಎಂದರು.
ಇನ್ನು, ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷರು ತನ್ನ ಮಿಥ್ಯಾರೋಪದ ಈ ಹೇಳಿಕೆಯನ್ನು ಹಿಂಪಡೆದು ಈ ಬಗ್ಗೆ ಸ್ಪಷ್ಟೀಕರಣ ನೀಡದಿದ್ದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.