ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಕತ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿದ್ದಾರೆ. ಈ ಪ್ರಕರಣ ಸಂಬಂಧ ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಣ ಇಲಾಖಾ ಅಧಿಕಾರಿಗಳು ಶನಿವಾರ ಸಭೆ ನಡೆಸಿದ್ದಾರೆ.
ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಲೋಕೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇನ್ನು ಮುಂದೆ ಶಾಲೆಯಲ್ಲಿ ಶೈಕ್ಷಣಿಕ ವಿಚಾರ ಹೊರತುಪಡಿಸಿ ಯಾವುದೇ ಕಾರ್ಯಕ್ರಮಕ್ಕೆ ಅವಕಾಶ ಇರುವುದಿಲ್ಲ ಎಂಬ ನಿರ್ಣಯ ಕೈಗೊಳ್ಳಲಾಯಿತು. ಅಲ್ಲದೇ, ಈ ರೀತಿಯಾದ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.