ಹೇರೂರು: ಶಾಸಕ ಕೆ.ರಘುಪತಿ ಭಟ್ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಚಾಂತಾರು ಗ್ರಾ.ಪಂ. ವ್ಯಾಪ್ತಿಯ ಹೇರೂರು ಹೇರಂಜೆ ರೈಲ್ವೆ ಗೇಟ್ ಬಳಿಯ ರಸ್ತೆಗೆ ಖಾಸಗಿ ಜಾಗದ ಸಮಸ್ಯೆ ಇದ್ದುದರಿಂದ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕ ಹಿತಾಸಕ್ತಿಯಿಂದ ಖಾಸಗಿ ಜಾಗದವರೊಂದಿಗೆ ಚರ್ಚೆ ನಡೆಸಿ ರಸ್ತೆಗೆ ತಡೆ ಮಾಡದಂತೆ ಮನವಿ ಮಾಡಿಕೊಂಡರು.
ಈ ಸಂದರ್ಭ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ವೀಣಾ ನಾಯ್ಕ್, ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಚಾಂತಾರು ಗ್ರಾ.ಪಂ. ಅಧ್ಯಕ್ಷ ಮೀರಾ ಸದಾನಂದ ಪೂಜಾರಿ, ಉಪಾಧ್ಯಕ್ಷ ಲಕ್ಷ್ಮೀ, ಸದಸ್ಯರಾದ ಉದಯ್ ಕಾಮತ್, ಪ್ರೇಮಾ ಶೆಟ್ಟಿ ಹಾಗೂ ಸ್ಥಳೀಯ ಉಪಸ್ಥಿತರಿದ್ದರು.