ಬೆಂಗಳೂರು: ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತಾರಕಕ್ಕೇರಿದ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರೌಢಶಾಲೆಗಳಿಗೆ ಮೂರು ದಿನಗಳ ಕಾಲ ನೀಡಿದ್ದ ರಜೆ ಇದೀಗ ಮುಕ್ತಾಯಗೊಂಡಿದೆ. ಸೋಮವಾರದಿಂದ 9 ಮತ್ತು 10ನೇ ತರಗತಿಗಳು ಎಂದಿನಂತೆ ಪುನರಾರಂಭಗೊಂಡಿವೆ.
ರಾಜ್ಯಾದ್ಯಂತ ಭುಗಿಲೆದ್ದ ಹಿಜಾಬ್ ಕೇಸರಿ ಶಾಲು ಸಂಘರ್ಷ ಹಿಂಸಾಚಾರಕ್ಕೆ ತಿರುಗಿದ ಹಿನ್ನಲೆ ರಾಜ್ಯ ಸರ್ಕಾರ ಪ್ರೌಢಶಾಲೆ ಸೇರಿದಂತೆ, ಕಾಲೇಜು, ವೃತ್ತಿಪರ ಕೋರ್ಸುಗಳಿಗೆ ರಜೆ ಘೊಷಿಸಿತ್ತು. ಇದೀಗ ಶಿಕ್ಷಣ ಇಲಾಖೆಯು ಪೊಲೀಸ್ ಬಂದೋಬಸ್ತ್ ಮೂಲಕ ಪ್ರೌಢಶಾಲೆಗಳನ್ನು ಆರಂಭಿಸಲು ಮುಂದಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿರುವ ಶಾಲೆಗಳ ಬಳಿ ಸೆಕ್ಷನ್ 144 ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.