ಐಕಳ: ಐಕಳಬಾವ ಕಾಂತಾಬಾರೆ-ಬೂದಾಬಾರೆ ಕಂಬಳೋತ್ಸವವು ಫೆ.26ರ ಬೆಳಿಗ್ಗೆ 8.30 ಕ್ಕೆ ಧಾರ್ಮಿಕ ವಿಧಿ ವಿಧಾನದೊಂದಿಗೆ ಜರುಗಲಿರುವುದು.
ಕಾರ್ಯಕ್ರಮದಲ್ಲಿ ಡಾ.ಎಂ.ಎನ್ ರಾಜೇಂದ್ರ ಕುಮಾರ್, ದೋಗಣ್ಣ ಸಿ ಶೆಟ್ಟಿ, ಐಕಳ ಹರೀಶ್ ಶೆಟ್ಟಿ, ಐಕಳಬಾವ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು, ಚಿತ್ತರಂಜನ ಭಂಡಾರಿ ಐಕಳಬಾವ, ವೈ.ಯೋಗೀಶ್ ರಾವ್, ಪ್ರಮೋದ್ ಶೆಟ್ಟಿ ಐಕಳಬಾವ, ಐಕಳ ಮುರಳೀಧರ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೃಷ್ಣ ಮಾರ್ಲ ಹಿರಿಮನೆ ಐಕಳ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಮುಂಬಯಿ ಕಂಬಳ ಸಮಿತಿ ಗೌರವಾಧ್ಯಕ್ಷರು, ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಸಂಚಾಲಕರು, ಕೋಶಾಧಿಕಾರಿ, ಕಾರ್ಯದರ್ಶಿಗಳು, ಸಂಘಟನಾ ಕಾರ್ಯದರ್ಶಿಗಳು ಹಾಗೂ ಜೊತೆ ಕಾರ್ಯದರ್ಶಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.