ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮದ ಪ್ರಸಿದ್ಧ ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ ಫೆ.17ರಂದು ವೇದಮೂರ್ತಿ ನಡ್ವಂತಾಡಿ ಉದಯ ಪಾಂಗಣ್ಣಾಯ ಇವರ ಮಾರ್ಗದರ್ಶನದಲ್ಲಿ ‘ಅಷ್ಟಬಂಧ ಬ್ರಹ್ಮಕಲಶೋತ್ಸವ’ ನಡೆಯಲಿದೆ.
‘ಅಷ್ಟಬಂಧ ಬ್ರಹ್ಮಕಲಶೋತ್ಸವ’ ಕ್ಕೆ ದೇವಸ್ಥಾನವನ್ನು ಅಲಂಕಾರ ಮಾಡಿ ಸಿದ್ಧಗೊಳಿಸಲಾಗಿದೆ. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘು ಎಲ್. ಶೆಟ್ಟಿ ನೇತೃತ್ವದ ವಿವಿಧ ಉಪ ಸಮಿತಿ ಸದಸ್ಯರು ಬ್ರಹ್ಮಕಲಶೋತ್ಸವದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ.