ಬೆಂಗಳೂರು: ವಿಶ್ವವಿದ್ಯಾಲಯ ಕುಲಸಚಿವರುಗಳಿಗೆ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿ.ವಿ. ಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡುವಂತೆ ಉನ್ನತ ಶಿಕ್ಷಣ ಇಲಾಖೆ ಎಸಿಎಸ್ ಜಿ.ಕುಮಾರ್ ನಾಯಕ್ ಅವರು ಸೂಚನೆ ನೀಡಿದ್ದಾರೆ.
ಕೆಲವು ವಿ.ವಿಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿವೆ. ಪ್ರಸಕ್ತ ಸಾಲಿನ ಪಾಠ ಪ್ರವಚನಗಳು ಕೊರೋನಾ, ಓಮಿಕ್ರಾನ್ ಸೋಂಕು ಹೆಚ್ಚಳ ಮತ್ತು ಅತಿಥಿ ಉಪನ್ಯಾಸಕರ ಮುಷ್ಕರದಿಂದ ಮುಗಿದಿಲ್ಲ. ಈ ಹಿನ್ನಲೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡಲು ಕೋರಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡುವ ತೀರ್ಮಾನ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಜಿ.ಕುಮಾರ್ ನಾಯಕ್ ಅವರು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.