ಮೂಡಬಿದ್ರೆ: ತಾಲೂಕಿನ ಆಲಂಗಾರು ಸಂತ ಥೋಮಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭವು ಫೆ.19ರಂದು ಕೆಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪರಮಪೂಜ್ಯ ಡಾ.ಪೀಟರ್ ಪಾವ್ಲ್ ಡಿ’ಸೋಜ ಅಧ್ಯಕ್ಷತೆಯಲ್ಲಿ ಬೆಳಗ್ಗೆ 9.30ಕ್ಕೆ ದಿವ್ಯ ಬಲಿಪೂಜೆಯೊಂದಿಗೆ ಆರಂಭಗೊಳ್ಳಲಿದೆ ಎಂದು ಶಾಲಾ ಸಂಚಾಲಕ ಫಾ.ವಾಲ್ಟರ್ ಡಿ’ಸೋಜ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫಾ.ವಾಲ್ಟರ್ ಡಿ’ಸೋಜ ಅವರು ಶತಮಾನೋತ್ಸವದಲ್ಲಿ ಶಾಲಾ ಹಳೆವಿದ್ಯಾರ್ಥಿ ಹಾಗೂ ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಫ್ರಾನ್ಸಿಸ್ ಸೆರಾವೋ ಎಸ್.ಜೆ, ಶಾಲಾ ಹಳೆವಿದ್ಯಾರ್ಥಿ ಹಾಗೂ ಸುಪ್ರೀಂಕೋರ್ಟ್ ನ್ಯಾಯಾಧೀಶ ಜಸ್ಟೀಸ್ ಎಸ್ ಅಬ್ದುಲ್ ನಝೀರ್, ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕ್ರೈಸ್ತ ಅಭಿವೃದ್ಧಿ ನಿಗಮದ ಅಧ್ಯಕ್ಷ ಜೋಯ್ಲಸ್ ಡಿ’ಸೋಜ, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಕೆಥೋಲಿಕ್ ಶಿಕ್ಷಣ ಮಂಡಳಿ ಕಾರ್ಯದರ್ಶಿ ವಂ.ಫಾ, ಆಂಟನಿ ಸೆರಾ, ಮೂಡುಬಿದಿರೆ ವಲಯ ಪ್ರಧಾನ ಕೆಥೋಲಿಕ್ ಧರ್ಮಗುರು ಫಾ.ಪಾವ್ಲ್ ಸಿಕ್ವೇರ, ಆಲಂಗಾರು ಬಡಗ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ್ ಭಟ್, ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜು, ಅದಾನಿ ಸಮೂಹ ಸಂಸ್ಥೆಯ ಉಪಾಧ್ಯಕ್ಷ ಕಿಶೋರ್ ಆಳ್ವ, ಐರಿನ್ ಮಿನೇಜಸ್, ಪ್ರೆಸಿಲ್ಲಾ ಡಿ’ಮೆಲ್ಲೋ, ಲಿಝಿ ಚಾಕೋ, ಉದ್ಯಮಿ ಅಬ್ದುಲ್ ರವೂಫ್, ಉದ್ಯಮಿ ಕೆ.ಎಮ್.ಶೆಟ್ಟಿ ಮತ್ತಿತರ ಗಣ್ಯರು ಭಾಗವಹಿದಲಿದ್ದಾರೆ ಎಂದರು.
ಫೆ.19: ಆಲಂಗಾರು ಸಂತ ಥೋಮಸ್ ಅನುದಾನಿತ ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಮಾರಂಭ
Subscribe
Login
0 Comments