ಹೊಸ್ಮಾರು: ಕರ್ನಾಟಕ ರಾಜ್ಯ ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠ ನಾರಾಯಣಗುರು ಮಠ ಸೋಲೂರು ಬೆಂಗಳೂರು ಇದರ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಬಲ್ಯೊಟ್ಟುವಿನ ಮೂಲಮಠಕ್ಕೆ ಆಗಮಿಸುತ್ತಿದ್ದಾರೆ. ಈ ಪ್ರಯುಕ್ತ ಫೆ.20ರಂದು ಹೊಸ್ಮಾರು ಇಲ್ಲಿನ ಬಲ್ಯೊಟ್ಟು ಗುರುಕೃಪಾ ಸೇವಾಶ್ರಮದಲ್ಲಿ ಸ್ವಾಮೀಜಿಯವರ ಪುರಪ್ರವೇಶ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಗುವುದೆಂದು ಗುರುವಂದನಾ ಸಮಿತಿಯ ಗೌರವಾಧ್ಯಕ್ಷ ಭಾಸ್ಕರ ಎಸ್.ಕೋಟ್ಯಾನ್ ಅವರು ಫೆ.17ರಂದು ಗುರುಕೃಪಾ ಸೇವಾಶ್ರಮದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೂಡುಬಿದರೆ-ಮುಲ್ಕಿ ಕ್ಷೇತ್ರ ಶಾಸಕ ಉಮಾನಾಥ ಕೋಟ್ಯಾನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಗುರುವಂದನಾ ಸಮಿತಿಯ ಅಧ್ಯಕ್ಷ ವಸಂತ ಭಟ್, ಕಾರ್ಯಾಧ್ಯಕ್ಷ ಗಂಗಾಧರ ಮಿತ್ತಮಾರ್, ಪುರುಷೋತ್ತಮ್ ರಾವ್, ಕಾರ್ಯದರ್ಶಿ ಕೃಷ್ಣಕುಮಾರ್, ಎಸ್ಡಿಎಂಸಿ ಅಧ್ಯಕ್ಷ ಜಯವರ್ಮ ಜೈನ್, ಪ್ರಾಂಶುಪಾಲ ರೋಹಿತ್ ಕುಮಾರ್, ಮುಖ್ಯೋಪಾಧ್ಯಾಯ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.