Sunday, June 8, 2025

ಫೆ.19: ಕಾರ್ಕಳ ತಾಲೂಕು ಮಟ್ಟದ ಕಂದಾಯ ಮೇಳ

ಕಾರ್ಕಳ: ತಾಲೂಕು ವಿಧಾನಸಭಾ ಕ್ಷೇತ್ರಕ್ಕೆ ಸಂಭಂಧಿಸಿದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ಕಂದಾಯ ಮೇಳ ಕಾರ್ಯಕ್ರಮವನ್ನು ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾ.ಪಂ. ಮೈದಾನದಲ್ಲಿ ಫೆ.19ರಂದು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ಕಂದಾಯ ಸಚಿವ ಆರ್.ಅಶೋಕ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಫೆ.11 ರವರೆಗೆ ಎಲ್ಲಾ ಇಲಾಖೆಗಳಲ್ಲಿ ವಿಲೇವಾರಿಯಾಗದೆ ಬಾಕಿ ಉಳಿದಿರುವ 8956 ಕಡತಗಳಲ್ಲಿ ಫೆ.12 ರಿಂದ ಫೆ.19 ವರೆಗಿನೆ ಕಡತ ವಿಲೇವಾರಿ ಸಪ್ತಾಹ ಅಭಿಯಾನದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಎಲ್ಲಾ ಇಲಾಖಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು 6181 ಕಡತಗಳ ವಿಲೆವಾರಿ ಮಾಡಿದ್ದಾರೆ. ಈ ಮೂಲಕ ಶೇ 70 ಕಡತ ವಿಲೇವಾರಿಯಾಗಿದ್ದು, ಸಾರ್ವಜನಿಕರು ಕಛೇರಿಗೆ ಅಲೆದಾಡುವ ಸಮಸ್ಯೆ ನಿವಾರಣೆಯಾಗಿದೆ. ಈ ಕಡತ ವಿಲೇವಾರಿ ಸಪ್ತಾಹ ಅಭಿಯಾನದ ಭಾಗವಾಗಿ ಫೆ.19ರಂದು ನಡೆಯುವ ಕಂದಾಯ ಮೇಳದಲ್ಲಿ ವಿವಿಧ ಇಲಾಖೆಗಳ 4198 ಅರ್ಹ ಫಲಾನುಭವಿಗಳಿಗೆ ಸರ್ಕಾರದ ವತಿಯಿಂದ ದೊರಕುವ ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಪ್ರಯೋಜನವಾಗಲಿದೆ ಎಂದು ತಾಲೂಕು ಕಛೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles