ಕಾರ್ಕಳ: ತಾಲೂಕಿನ ಅಜೆಕಾರು ಕೈಕಂಬ ಸಮೀಪದ ಮಾರಿಗುಡಿ ಬಳಿ ಲಾರಿಯೊಂದು ತಿರುವಿನಲ್ಲಿ ಅಪಘಾತಕ್ಕೀಡಾದ ಘಟನೆ ಸೋಮವಾರ ನಡೆದಿದೆ.
ಅಪಘಾತದಲ್ಲಿ ಲಾರಿ ಚಾಲಕನ ಕಾಲಿಗೆ ತೀವ್ರ ಪೆಟ್ಟಾಗಿದ್ದು, ನಿರ್ವಾಹಕ ಅಪಾಯದಿಂದ ಪಾರಾಗಿದ್ದಾನೆ. ಹುಬ್ಬಳ್ಳಿಯಿಂದ ಕಾರ್ಕಳಕ್ಕೆ ಸಾಗುತಿದ್ದ ಲಾರಿಯಲ್ಲಿ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಸುತಿದ್ದರು. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.