ಮೂಡುಬಿದಿರೆ: ಕಾರ್ಕಳ ಯುವ ಬಂಟರ ಸಂಘದ ವತಿಯಿಂದ ಮಂಗಳವಾರ ನಡೆದ ಕ್ರೀಡಾಕೂಟದಲ್ಲಿ ಮೂಡಬಿದರೆ ಯುವ ಬಂಟರ ಸಂಘದ ತಂಡ ಅತಿ ಹೆಚ್ಚು ಗೆಲುವು ಸಾಧಿಸುವ ಮೂಲಕ ಚಾಂಪಿಯನ್ಶಿಪ್ ಕೀರಿಟ ಮುಡಿಗೇರಿಸಿಕೊಂಡಿದೆ.
ಯುವ ಬಂಟರ ಸಂಘದ ತಂಡವು ವಾಲಿಬಾಲ್ ಪ್ರಥಮ, ತ್ರೋಬಾಲ್ ಪ್ರಥಮ, ನೃತ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದು ಗೆಲುವು ಸಾಧಿಸುವ ಮೂಲಕ ಚಾಂಪಿಯನ್ಶಿಪ್ ಕೀರೀಟವನ್ನು ತಮ್ಮದಾಗಿಸಿಕೊಂಡಿದೆ.
ಈ ಸಂದರ್ಭ ಯುವ ಬಂಟರ ಸಂಘದ ಅಧ್ಯಕ್ಷ ಜಯಕುಮಾರ್ ಶೆಟ್ಟಿ, ಗೌರವ ಸಲಹೆಗಾರರಾದ ಮನೋಜ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂದೀಪ್ ಎಮ್ ಶೆಟ್ಟಿ, ಉಪಾಧ್ಯಕ್ಷ ರಮೇಶ್ ಶೆಟ್ಟಿ, ಸಂದೀಪ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಸುಧಾಕರ್ ಶೆಟ್ಟಿ, ಶೃತಿ ಶೆಟ್ಟಿ, ಸುಕುಮಾರ್ ಶೆಟ್ಟಿ, ಆದರ್ಶ ಶೆಟ್ಟಿ, ಸುಧೀರ್ ಶೆಟ್ಟಿ, ದೀಪಕ್ ಶೆಟ್ಟಿ ಉಪಸ್ಥಿತರಿದ್ದರು.