ಉಡುಪಿ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಹಾಗೂ ಶಿವಮೊಗ್ಗ ಗಲಭೆಯ ಹಿನ್ನಲೆಯಲ್ಲಿ ನಗರದ ಜನರಿಗೆ ಧೈರ್ಯ ಮೂಡಿಸುವ ಸಲುವಾಗಿ ಬುಧವಾರ ಪೊಲೀಸ್ ಪಥಸಂಚಲನ ಮಾಡಿದರು.
ನಗರದ ಜೋಡುಕಟ್ಟೆಯಿಂದ ಹೊರಟು ಪ್ರಮುಖ ಬೀದಿಗಳಲ್ಲಿ 90 ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಿಬ್ಬಂದಿ ಮತ್ತು ಇನ್ನೂರಕ್ಕೂ ಅಧಿಕ ಜಿಲ್ಲಾ ಪೊಲೀಸ್ ಸಿಬ್ಬಂದಿ ಪಥಸಂಚಲನ ಮಾಡಿದರು.
ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸಾರ್ವಜನಿಕರಿಗೆ ನಾವಿದ್ದೇವೆಂಬ ಭರವಸೆ ಮೂಡಿಸುವ ಸಲುವಾಗಿ ಪಥಸಂಚಲನ ನಡೆಸುತ್ತಿದ್ದೇವೆ. ಸಮಾಜದಲ್ಲಿ ಶಾಂತಿ ಕದಡುವಂತಹ ಸಂಘಟನೆಗಳಿಗೆ ಎಚ್ಚರಿಕೆ ನೀಡಿ, ಜನರಿಗೆ ಕಾನೂನು ಸುವ್ಯವಸ್ಥೆಗಳ ಬಗ್ಗೆ ಆತಂಕಬೇಡ ಎಂದರು.