ಉಡುಪಿ: ಹಿಜಾಬ್ ವಿಚಾರವಾಗಿ ಕೋರ್ಟ್ ತೀರ್ಪು ಬರುವವರೆಗೆ ಪರೀಕ್ಷೆಗಳನ್ನು ಮುಂದೂಡುವಂತೆ ಹಿಜಾಬ್ ಹೋರಾಟಗಾರ್ತಿಯರಾದ 5 ಮಂದಿ ವಿದ್ಯಾರ್ಥಿನಿಯರು ಉಡುಪಿ ಡಿಡಿಪಿಯು ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.
ಈಗಾಗಲೇ ಹಿಜಾಬ್ ವಿಚಾರವಾಗಿ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದ್ದು ಈ ಮಧ್ಯೆ ಪಿಯು ಇಲಾಖೆಯು ಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಈ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿನಿಯರು ಡಿಡಿಪಿಯು ಅವರಿಗೆ ಮನವಿ ಮಾಡಿದರು.