Sunday, June 8, 2025

ಆಳ್ವಾಸ್‌: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃತಿಗಳ ಮನನ ಕಾರ್ಯಕ್ರಮ

ಮೂಡುಬಿದಿರೆ: ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮೂರು ಕೃತಿಗಳ ಮನನ ಕಾರ್ಯಕ್ರಮವು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ನಂದೀಶ್ ಲೇಖಕ ಒಬ್ಬ ಸಾಧನ ಅಷ್ಟೇ, ಲೇಖಕ ಕಥೆಯನ್ನು ಹುಡುಕುವುದಲ್ಲ ಬದಲಿಗೆ ಕಥೆಯೇ ತನ್ನಷ್ಟಕ್ಕೆ ಸೃಷ್ಟಿಗೊಳ್ಳುತ್ತದೆ. ಓದುಗನಿಗೆ ಓದಬೇಕೆಂಬ ಧಾವಂತ ಇರುವುದು ನಿಜ ಅದನ್ನು ಸರಿಯಾದ ರೀತಿಯಲ್ಲಿ ಓದಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಸಹಾಯಕ ಪ್ರಧ್ಯಾಪಕ ಡಾ. ಧನಂಜಯ ಕುಂಬ್ಲೆ ಅವರು ಗೋಪಾಲಕೃಷ್ಣ.ಪೈ ಅವರ ‘ಸ್ವಪ್ನ ಸಾರಸ್ವತ’, ರಂಗನಿರ್ದೇಶಕ ಡಾ.ದಿನಕರ.ಎಸ್.ಪಚ್ಚನಾಡಿ ಕುಂ.ವೀರಭದ್ರಪ್ಪ ಅವರ ‘ಅರಮನೆ’ ಹಾಗೂ ಕತೆಗಾರ್ತಿ ಸ್ನೇಹಲತಾ ದಿವಾಕರ್ ರಾಘವೇಂದ್ರ ಪಾಟೀಲ ಅವರ ‘ತೇರು’ ಎಂಬ ಕೃತಿಗಳನ್ನು ವಿದ್ಯಾರ್ಥಿಗಳಿಗೆ ಮನನ ಮಾಡಿಸಿದರು.

ಕಾರ್ಯಕ್ರಮದಲ್ಲಿ ಉಳ್ಳಾಲ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಧನಂಜಯ ಕುಂಬ್ಳೆ ಮತ್ತು ಮೂಡುಬಿದಿರೆ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾದ ವೇಣುಗೋಪಾಲ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಕನ್ನಡ ಪುಸ್ತಕ ಆಡಳಿತಾಧಿಕಾರಿ ಕಿರಣ್ ಸಿಂಗ್, ಸದಸ್ಯ ಸಂಚಾಲಕ ಟಿ.ಎನ್.ಖಂಡಿಗೆ, ಆಳ್ವಾಸ್ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಯೋಗೀಶ್ ಕೈರೋಡಿ ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles