ನವದೆಹಲಿ: ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯದ ತಯಾರಿ ಭರದಿಂದ ಸಾಗಿದೆ. ರಕ್ಷಣಾ ಕಾರ್ಯಕ್ಕೆ ನಾಲ್ಕು ಪ್ರತ್ಯೇಕ ತಂಡಗಳನ್ನು ರಚನೆ ಮಾಡಿದ್ದು, ಉಕ್ರೇನ್ ದೇಶದ ಚೆಕ್ಪೋಸ್ಟ್ಗೆ ಬರುವಂತೆ ಭಾರತದ ರಾಯಭಾರ ಕಚೇರಿ ಸೂಚನೆ ನೀಡಿದೆ.
ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪೋಲೆಂಡ್, ಸ್ಲೊವಾಕಿಯಾ, ರೊಮೇನಿಯಾ, ಹಂಗೇರಿ ದೇಶಗಳ ಗಡಿ ಭಾಗಕ್ಕೆ ಬರುವಂತೆ ಭಾರತೀಯರಿಗೆ ಸೂಚಿಸಲಾಗಿದೆ. ನಾಲ್ಕು ರಕ್ಷಣಾ ತಂಡಗಳು ನಾಲ್ಕು ರಾಷ್ಟ್ರಗಳ ಗಡಿಗೆ ತೆರಳಿ ಭಾರತೀಯರನ್ನು ರಕ್ಷಿಸಲಿದೆ. ಪಾಸ್ಪೋರ್ಟ್, ಅಗತ್ಯವಿರುವಷ್ಟು ಹಣ, ಕೊವಿಡ್-19 ಡಬಲ್ ವ್ಯಾಕ್ಸಿನೇಷನ್ ಪ್ರಮಾಣಪತ್ರ ಇದ್ದಲ್ಲಿ ತರಬೇಕು ಎಂದು ಭಾರತದ ರಾಯಭಾರ ಕಚೇರಿ ಸೂಚಿಸಿದೆ.
ಎಎನ್ಐ ಮಾಹಿತಿ ಪ್ರಕಾರ ಭಾರತ ಸರ್ಕಾರ ಉಚಿತವಾಗಿ ಉಕ್ರೇನ್ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ಭಾರತೀಯ ಪ್ರಜೆಗಳು ಕೈವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಆಶ್ರಯ ಪಡೆದಿದ್ದಾರೆ.