Sunday, June 8, 2025

ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳನ್ನು ಕರೆತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ: ವಿಪಕ್ಷ ನಾಯಕ ಸಿದ್ಧರಾಮಯ್ಯ

ಮಂಗಳೂರು: ಉಕ್ರೇನ್‌ನಲ್ಲಿ ಯುಧ್ದ ನಡೆಯೋದು 10-15 ದಿನಗಳ ಹಿಂದೆಯೇ ಗೊತ್ತಿತ್ತು. ಭಾರತದ, ಕರ್ನಾಟಕದ ವಿದ್ಯಾರ್ಥಿಗಳು ಅಲ್ಲಿದ್ದಾರೆ ಎಂಬುದು ಗೊತ್ತಿತ್ತು. ಅವರನ್ನು ಸುರಕ್ಷಿತವಾಗಿ ಕರೆಸಿಕೊಳ್ಳಲು ಕೇಂದ್ರ ಸರ್ಕಾರ ಆಗಲಿ ರಾಜ್ಯ ಸರ್ಕಾರ ಆಗಲಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿದ್ಯಾರ್ಥಿಗಳು ಬಂಕರ್ಸ್‌ಗಳಲ್ಲಿ, ಬೇರೆ ಬೇರೆ ಕಡೆಗಳಲ್ಲಿ ಅವಿತುಕೊಂಡಿರಬೇಕಾದ ಪರಿಸ್ಥಿತಿ ಇದೆ. ವಿದ್ಯಾರ್ಥಿಗಳ ಪಕ್ಕದಲ್ಲೇ ಬಾಂಬ್ ಸ್ಫೋಟ ಆಗುತ್ತಿದೆ. ವಿಮಾನಗಳು ಸ್ಥಗಿತಗೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ಮರಳಿ ತಾಯ್ನಾಡಿಗೆ ಬರಲು ಸಮಸ್ಯೆಯಾಗಿದೆ. ಬಹಳ ಮಂದಿ ವಿದ್ಯಾರ್ಥಿಗಳಿಗೆ ಊಟಕ್ಕೂ ತೊಂದರೆಯಾಗಿದ್ದು, ದುಡ್ಡೂ ಇಲ್ಲ. ಸರಕಾರ ಇಂತಹ ವಿಷಯಗಳಲ್ಲಿ ಈ ರೀತಿ ಮೈಮರೆಯಬಾರದು. ಬಹಳ ಎಚ್ಚರಿಕೆಯಿಂದ ಇರಬೇಕು. ಸಿಎಂ ಬೊಮ್ಮಾಯಿ ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ಮೂಲಕ ಮಾತನಾಡಿ ವಿಮಾನ ವೆಚ್ಚ ಕೊಟ್ಟು ತಕ್ಷಣ ರಾಜ್ಯದ ಎಲ್ಲಾ ವಿದ್ಯಾರ್ಥಿಗಳನ್ನು ಕರೆ ತರುವ ವ್ಯವಸ್ಥೆ ಮಾಡಬೇಕು. ಇದು ಭಾರತ ಸರ್ಕಾರ ಹಾಗೂ ರಾಜ್ಯ ಸರಕಾರದ ಕರ್ತವ್ಯ ಎಂದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles