ಹಾವೇರಿ: ಉಕ್ರೇನ್ನಲ್ಲಿ ಕರ್ನಾಟಕದ ಯುವಕ ನವೀನ್ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಉಕ್ರೇನ್ನಲ್ಲಿ ನಾಲ್ಕನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಹಾವೇರಿಯ ಚಳಗೇರಿ ಗ್ರಾಮದ ನವೀನ್ ಇಂದು ಬೆಳಿಗ್ಗೆ ನಡೆದ ರಷ್ಯಾ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಈ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನವೀನ್ ಸಾವಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ವಿದ್ಯಾರ್ಥಿಯ ಸಾವಿನ ಸುದ್ದಿ ಕೇಳಿ ದುಖಿಃತನಾಗಿದ್ದೇನೆ. ವಿದೇಶಾಂಗ ಅಧಿಕಾರಿಗಳ ಜೊತೆ ಮಾತುಕತೆ ನೆಡೆಸಿದ್ದೇನೆ. ಮೃತದೇಹ ತರಲು ಸಹಕಾರ ನೀಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಸಾಂತ್ವಾನ ನೀಡಿದರು.
ಹಾಗೇ ಈ ಬಗ್ಗೆ ಪ್ರಧಾನಿ ಮೋದಿ ಕುಟುಂಬಸ್ಥರಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದು, ಆ ದೇವರು ಈ ಸಾವನ್ನು ತಡೆದುಕೊಳ್ಳುವ ಶಕ್ತಿ ಕರುಣಿಸಲಿ ಎಂದು ಕುಟುಂಬಸ್ಥರಿಗೆ ಸಾಂತ್ವಾನ ನೀಡಿದರು.