ಉಡುಪಿ: ಕೇರಳದ ಕೆಎಸ್ಆರ್ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸಾವನ್ನಪ್ಪಿದ ಘಟನೆ ಉಡುಪಿಯ ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ನಡೆದಿದೆ.
ಸಾವನ್ನಪ್ಪಿದವರನ್ನು ಗಾಯತ್ರಿ ಪೈ ಹಾಗೂ ಟಿ.ಗಣೇಶ್ ಪೈ ಎಂದು ಗುರುತಿಸಲಾಗಿದೆ. ಗಾಯತ್ರಿ ಪೈ ಅವರು ಇಂದು ಮುಂಜಾನೆ ಹುಬ್ಬಳ್ಳಿಯಿಂದ ಆಗಮಿಸಿದ್ದು, ಅವರನ್ನು ಕರೆದುಕೊಂಡು ಹೋಗಲು ತಂದೆ ಟಿ.ಗಣೇಶ್ ಪೈ ಅವರು ದ್ವಿಚಕ್ರ ವಾಹನದಲ್ಲಿ ಬಂದಿದ್ದಾರೆ.
ಅವರು ಹಿಂತಿರುಗುತ್ತಿದ್ದ ವೇಳೆ ಉಡುಪಿಯಿಂದ ಸಂತೆಕಟ್ಟೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯುವತಿ ತಂದೆ ಕರಾವಳಿ ಕಾವಲು ಪಡೆಯ ಗುಪ್ತಚರ ಇಲಾಖೆಯಲ್ಲಿ ಎಎಸ್ ಐ ಸೇವೆ ಸಲ್ಲಿಸುತ್ತಿರುವ ಅವರು ಕೂಡ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.